Breaking News

ಅಕ್ರಮವಾಗಿ 8 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಸಾಗಣೆ; ಲಾರಿ ಜಪ್ತಿ!

ರಾಯಚೂರು: ಅಕ್ರಮವಾಗಿ ಲಾರಿಯಲ್ಲಿ ಸಾಗಣೆ ಮಾಡುತ್ತಿದ್ದ 8 ಲಕ್ಷ ರೂಪಾಯಿ ಮೌಲ್ಯದ ಪಡಿತರ ಅಕ್ಕಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ರಾಯಚೂರಿನ ಸಿರವಾರ ತಾಲೂಕಿನ ಹಾಲಾಪುರದಿಂದ ಸಾಗಿಸುತ್ತಿದ್ದಾಗ ರೇಡ್ ಮಾಡಲಾಗಿದೆ. 600 ಚೀಲಗಳು ಪೊಲೀಸ್‌ ವಶಕ್ಕೆ! ಕವಿತಾಳ-ಮಸ್ಕಿ ರಸ್ತೆಯ ಜಂಗಮರ ಹಳ್ಳಿ ಕ್ರಾಸ್ ಬಳಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಲಾರಿಯನ್ನು ಹಿಂಬಾಲಿಸಿದ ವೇಳೆ 600 ಅಕ್ಕಿ ಚೀಲಗಳಿದ್ದ ಲಾರಿಯನ್ನು ಜಪ್ತಿ ಮಾಡಿದ್ದಾರೆ. ಸುಮಾರು 8 ಲಕ್ಷ ರೂ. ಮೌಲ್ಯದ 30 ಟನ್ ಅಕ್ಕಿಯಿದ್ದ ಚೀಲಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮಾನ್ವಿ ತಾಲೂಕು ಆಹಾರ ನಿರೀಕ್ಷಕ ದೇವರಾಜ್ ದೂರು ನೀಡಿದ್ದು, ದಾಳಿ ವೇಳೆ ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದ ಆರೋಪಿ ವಿರೇಶ್ ಹಾಲಾಪುರ ಪರಾರಿಯಾಗಿದ್ದಾನೆ. ಈ ಬಗ್ಗೆ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share News

About BigTv News

Check Also

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ!

ದೊಡ್ಡಬಳ್ಳಾಪುರ: ಹೋಟೆಲ್‌ನಲ್ಲಿ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ …

Leave a Reply

Your email address will not be published. Required fields are marked *