ವಿಜಯಪುರ: ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಟೋಲ್ಗೇಟ್ ಬಳಿ ಮಂಗಳವಾರ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಬೈಕ್ ಸವಾರ ಸಜೀವ ದಹನವಾಗಿದ್ದಾನೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ, ಸಿಂದಗಿಯ ಅಭಿಷೇಕ ಸಾಹೇಬಗೌಡ ನಾಗರಹಳ್ಳಿ(19) ಬಸ್ಸಿನಲ್ಲಿ ಸಿಲುಕಿಕೊಂಡಿದ್ದು, ಸಜೀವ ದಹನವಾಗಿದ್ದಾನೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. ಸ್ಥಳಕ್ಕೆ ಸಿಂದಗಿ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ಆರಿಸಿದರು. ಸಿಂದಗಿ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

