Breaking News

ಮಸಬಿನಾಳ ಬಳಿ ಭೀಕರ ಅಪಘಾತ: ಎರಡು ಬೈಕ್ ಮುಖಾಮುಖಿ ಡಿಕ್ಕಿ, ಇಬ್ಬರು ಸಾವು

ಬಸವನಬಾಗೇವಾಡಿ: ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದ ಬಳಿ ನಡೆದಿದೆ. ಮೃತರನ್ನು ಇಂಗಳೇಶ್ವರ ತಾಂಡಾದ ನಿವಾಸಿ ಸಂತೋಷ ಲಾಲು ಚವಾಣ್ (32) ಹಾಗೂ ದೇಗಿನಾಳ ಗ್ರಾಮದ ಭೀಮನಗೌಡ ಪಾಟೀಲ (45) ಎಂದು ಗುರುತಿಸಲಾಗಿದೆ. ಇನ್ನೂ ಅಪಘಾತದಲ್ಲಿ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಚಿಕಿತ್ಸೆಗಾಗಿ ಬಸವನಬಾಗೇವಾಡಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಮನಗೂಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ಘಟನೆ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

Share News

About BigTv News

Check Also

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ!

ದೊಡ್ಡಬಳ್ಳಾಪುರ: ಹೋಟೆಲ್‌ನಲ್ಲಿ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ …

Leave a Reply

Your email address will not be published. Required fields are marked *