Breaking News

ಶಿವಮೊಗ್ಗದಲ್ಲಿ ಘೋರ ಘಟನೆ : ಖಾಸಗಿ ಶಾಲಾ ಬಸ್ ಕೆಳಗೆ ಸಿಲುಕಿ ಒಂದೂವರೆ ವರ್ಷದ ಮಗು ಸಾವು!

ನಗರದ ಗೋಪಾಲಗೌಡ ಬಡಾವಣೆಯ ಚಂದನ ಪಾರ್ಕ್ ಸಮೀಪ ಮಾರ್ಚ್ 31ರ ಮಧ್ಯಾಹ್ನ ಒಂದೂವರೆ ವರ್ಷದ ಪುಟ್ಟ ಮಗು ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿದೆ. ಮಗು ಶಾಲೆಯಿಂದ ಬಂದ ತನ್ನ ಅಣ್ಣನನ್ನು ಕರೆತರಲು ಪೋಷಕರೊಂದಿಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. 18 ತಿಂಗಳ ಮಗು ಆರ್ಯನ್, ತನ್ನ ಅಣ್ಣನನ್ನು ಕರೆತರಲು ಪೋಷಕರೊಂದಿಗೆ ಸ್ಥಳಕ್ಕೆ ಬಂದಿದ್ದ. ಖಾಸಗಿ ಶಾಲಾ ಬಸ್‌ನಲ್ಲಿ ಅಣ್ಣನ ಬರುವಿಕೆಗೆ ಕುಟುಂಬದೊಂದಿಗೆ ಆರ್ಯನ್ ಕೂಡ ಕಾಯುತ್ತಿದ್ದ. ಈ ವೇಳೆ ಏಕಾಏಕಿ ರಸ್ತೆಯತ್ತ ಓಡಿದ ಮಗುವನ್ನು ಬಸ್ ಚಾಲಕ ಗಮನಿಸದ ಕಾರಣ ಮಗು ಬಸ್ ಚಕ್ರಕ್ಕೆ ಸಿಲುಕಿದೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡ ಮಗುವನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ವೈದ್ಯರು ಪರಿಶೀಲಿಸಿದಾಗ ಮಗು ಮೃತಪಟ್ಟಿರುವುದಾಗಿ ದೃಢಪಡಿಸಿದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ತಿಳಿದ ಕೂಡಲೇ ಪಶ್ಚಿಮ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಾಲಕನ ನಿರ್ಲಕ್ಷ್ಯವೇ ಕಾರಣವೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *