Breaking News

ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ ಅನಿಲ ಸೋರಿಕೆ: ಮೂವರ ಸಾವು

ಧನ್‌ಬಾದ್: ಹಳೆಯ ಕಬ್ಬಿಣ ಕದಿಯುವ ಪ್ರಯತ್ನದಲ್ಲಿ ಅನಿಲ ಸೋರಿಕೆಯಾಗಿ ಮೂವರು ಮೃತಪಟ್ಟ ಘಟನೆ ಜಾರ್ಖಂಡ್‌ನ ಮುನಿಡಿಹ್‌ನಲ್ಲಿ ನಡೆದಿದೆ. ಭಾನುವಾರ ಮುಂಜಾನೆ ಕಬ್ಬಿಣದ ಸ್ಕ್ರ್ಯಾಪ್ ಕದಿಯಲು ಹೋದ ತಂಡವು ಅನಿಲ ತುಂಬಿದ್ದ ಸಿಲಿಂಡರ್ ಕತ್ತರಿಸಿದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ತೀವ್ರ ಪ್ರಮಾಣದಲ್ಲಿ ಅನಿಲ ಹೊರಬಂದಿದ್ದು, ಅದನ್ನು ಸೇವಿಸಿದ ಮೂವರು ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಮೃತಪಟ್ಟಿದ್ದಾರೆ. ಅಸ್ವಸ್ಥಗೊಂಡ ಇತರ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *