Breaking News

ಪಡಿತರ ಅಕ್ಕಿ ಅಕ್ರಮ ಸಾಗಣೆ: ಆರೋಪಿ ಬಂಧನ

ಕೊಳ್ಳೇಗಾಲ: ತಾಲ್ಲೂಕಿನ ತೇರಂಬಳ್ಳಿ ಹಾಗೂ ಗೊಬ್ಬಳಿಪುರ ಗ್ರಾಮದ ಬಳಿ ಪ್ಯಾಸೆಂಜರ್ ಆಟೊದಲ್ಲಿ ಅಕ್ರಮವಾಗಿ 11 ಮೂಟೆಯಲ್ಲಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಇಂಡವಾಳು ಗ್ರಾಮದ ಅಶೋಕ ಎಂಬಾತನನ್ನು ಅಗರ ಮಾಂಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಆತನಿಂದ 512 ಕೆ.ಜಿ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಈತನು ಸರ್ಕಾರ ಜನರಿಗೆ ನೀಡಿರುವ ಪಡಿತರ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಸಲುವಾಗಿ ಆಟೊದಲ್ಲಿ ಸಾಗಾಣಿಕೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅಗರ ಮಾಂಬಳ್ಳಿ ಪೊಲೀಸರು ಮತ್ತು ಆಹಾರ ನಿರೀಕ್ಷಕರು ತೇರಂಬಳ್ಳಿ-ಗೊಬ್ಬಳಿಪುರ ರಸ್ತೆಯಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ. ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಜರುಗಿಸಿದ್ದಾರೆ. ದಾಳಿಯಲ್ಲಿ ಆಹಾರ ನಿರೀಕ್ಷಕ ಎನ್.ಎಂ ಪ್ರಸಾದ್, ಅಗರ ಮಾಂಬಳ್ಳಿ ಪೊಲೀಸ್ ಠಾಣೆಯ ಎಸ್‌ಐ ಕರಿಬಸಪ್ಪ, ಎಚ್.ಸಿ ಪರಶಿವಮೂರ್ತಿ, ಸಿಬ್ಬಂದಿ ಶಿವಕುಮಾರ್, ಉಸ್ಮಾನ್ ಇದ್ದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *