ಭದ್ರಾವತಿ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿಯನ್ನು ಭದ್ರಾವತಿ ಗ್ರಾಮಾಂತರ ಠಾಣೆಯ ಪೊಲೀಸರು ಈಚೆಗೆ ಬಂಧಿಸಿದ್ದಾರೆ. ತೀರ್ಥಹಳ್ಳಿ ನಿವಾಸಿ ಕೃಷ್ಣ (34) ಬಂಧಿತ ಆರೋಪಿ. ಈತನ ವಿರುದ್ಧ ಮನೆಗಳ್ಳತನ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಈತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಐದು ವರ್ಷಗಳು ತಲೆ ಮರೆಸಿಕೊಂಡಿದ್ದ. ಬಂಧನಕ್ಕೆ ಭದ್ರಾವತಿಯ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಲಯ ವಾರೆಂಟ್ ಹೊರಡಿಸಿತ್ತು. ಆರೋಪಿ ಇರುವ ಜಾಗದ ಬಗ್ಗೆ ಸುಳಿವು ಸಿಕ್ಕ ಬೆನ್ನಲ್ಲೇ ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

