ಪುತ್ತೂರು: ಕೇರಳದಿಂದ ಕೆಂಪುಕಲ್ಲು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಸುಳ್ಯಪದವು ಚೆಕ್ ಪೋಸ್ಟ್ ನಲ್ಲಿ ತಡೆದ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎ. 12ರಂದು ಪೊಲೀಸರು ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ನಡೆಯುತ್ತಿದ್ದಾಗ ಲಾರಿಯೊಂದು ಕೇರಳ ಭಾಗದಿಂದ ಆಗಮಿಸಿದ್ದು, ಅದನ್ನು ತಡೆದು ಪರಿಶೀಲಿಸಿದಾಗ ಕೆಂಪುಕಲ್ಲು ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಈ ಕುರಿತು ಚಾಲಕ ಮಾಡ್ನೂರು ಗ್ರಾಮದ ವಿಶ್ವನಾಥನನ್ನು ವಿಚಾರಿಸಿದಾಗ ಕೆಂಪುಕಲ್ಲನ್ನು ಕೇರಳದಿಂದ ಗುಂಡ್ಯ ಕಡೆಗೆ ಸಾಗಾಟ ಮಾಡುತ್ತಿರುವುದಾಗಿ ತಿಳಿಸಿದ್ದಾನೆ. ಲಾರಿಯು ಪ್ರಜಾನ್ ಶೆಟ್ಟಿ ಎಂಬವರಿಗೆ ಸೇರಿದ್ದಾಗಿದ್ದು, ಪರವಾನಿಗೆ ಇಲ್ಲದೆ ಸಾಗಾಟ ಮಾಡಿರುವ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

