ತುಮಕೂರು: ಶಿರಾದಿಂದ ಹಿರಿಯೂರಿಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಹಲವು ಸಾವು ನೋವು ಸಂಭವಿಸಿವೆ. ಶಿರಾ ತಾಲೂಕು ದ್ವಾರಾಳು ಬ್ರಿಡ್ಜ್ ಬಳಿ ಮಂಗಳವಾರ ಮಧ್ಯಾಹ್ನ ನಡೆದಿದೆ. ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್ನಲ್ಲಿದ್ದವರ ಪೈಕಿ 35ಕ್ಕೂ ಹೆಚ್ಚು ಜನರು ಗಾಯಗೊಂಡು, ಈ ಪೈಕಿ 10ಕ್ಕೂ ಹೆಚ್ಚು ಜನರಿಗೆ ತೀವ್ರ ಹಾನಿಯಾಗಿದೆ. ಶ್ರೀಕಾಂತ್ ಮತ್ತು 50 ವರ್ಷದ ಮಹಿಳೆ ಸೇರಿ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಎಸ್ಆರ್ಟಿಸಿ ಬಸ್ ಶಿಡ್ಲಘಟ್ಟ ಡಿಪೋ ಬಸ್ ಎನ್ನಲಾಗಿದೆ. ಗಾಯಾಳುಗಳನ್ನ ಶಿರಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ತುಮಕೂರು ಹಾಗೂ ಬೆಂಗಳೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

