Breaking News

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ತಿಂಗಳ ಹಿಂದಷ್ಟೇ ಆರಂಭವಾಗಿದ್ದ ‘ಶುದ್ಧ ತಿಂಡಿ’ ಹೋಟೆಲ್ ಸುಟ್ಟು ಭಸ್ಮ

ಬೆಂಗಳೂರಿನಲ್ಲಿ ಗುರುವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಇತ್ತೀಚಿಗಷ್ಟೇ ಆರಂಭವಾಗಿದ್ದ ಶುದ್ಧ ತಿಂಡಿ ಎಂಬ ಹೊಸ ಹೋಟೆಲ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ.ಇಂದು ಮಧ್ಯಾಹ್ನ ಬೆಂಗಳೂರಿನ ನೈಸ್ ರಸ್ತೆಯ ಸೋಂಪುರ ಸರ್ಕಲ್ ಸಮೀಪ ಕಳೆದ ತಿಂಗಳು ಆರಂಭವಾಗಿದ್ದ ಶುದ್ಧ ತಿಂಡಿ ಹೋಟೆಲ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆಯೇ ಹೊತ್ತಿ ಉರಿದಿದೆ. ಕಳೆದ ಮಾರ್ಚ್ ನಲ್ಲಿ ಅಷ್ಟೇ ಈ ಶುದ್ಧ ತಿಂಡಿ ಹೋಟೆಲ್ ಹೊಸದಾಗಿ ಆರಂಭವಾಗಿತ್ತು. ಆದರೆ ಇಂದು ಇಡ್ಲಿ ಸ್ಟೀಮರ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಮಾತ್ರದಲ್ಲಿ ಇಡೀ ಹೋಟೆಲ್ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ, ಒಳಗಡೆ ಇದ್ದ ಸಿಬ್ಬಂದಿ ಬಚಾವ್ ಆಗಿದ್ದಾರೆ.

Share News

About BigTv News

Check Also

ಯೂಟ್ಯೂಬ್‌ನಲ್ಲಿ ವರದಿ ಮಾಡಿದಕ್ಕಾಗಿ ಜೀವ ಬೆದರಿಕೆ

ಕೋಟ: ಯೂಟ್ಯೂಬ್‌ ಡಿಜಿಟಲ್‌ ಮಾಧ್ಯಮದಲ್ಲಿ ವರದಿಯೊಂದನ್ನು ಪ್ರಕಟ ಮಾಡಿದಕ್ಕಾಗಿ ಮನೆಗೆ ಅಕ್ರಮ ಪ್ರವೇಶ ಮಾಡಿ ಜೀವ ಬೆದರಿಕೆ ಹಾಕಲಾಗಿದೆ ಎಂದು …

Leave a Reply

Your email address will not be published. Required fields are marked *