Breaking News

ನಂಜನಗೂಡು: ಬೈಕ್ ಟೈರ್‌ ಸ್ಫೋಟ, ವಿದ್ಯಾರ್ಥಿನಿ ಸಾವು

ಬೈಕ್‌ನಲ್ಲಿ ಚಲಿಸುತ್ತಿದ್ದಾಗ ಟೈರ್ ಸ್ಫೋಟ ಆಗಿ ವಿದ್ಯಾರ್ಥಿನಿ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಗಣೇಶಪುರ ಗ್ರಾಮದ ಬಿಳಿ ಸಂಭವಿಸಿದೆ. ಮಡುವಿನಹಳ್ಳಿಯ ಮಹದೇವಸ್ವಾಮಿ ಎಂಬುವವರ ಪುತ್ರಿ ಸಿಂಚನಾ (16) ಮೃತರು. ಮಹದೇವಸ್ವಾಮಿ ಅವರು ಪತ್ನಿ, ಮಗಳು ಮತ್ತು ಮಗನ ಜತೆ ಬೈಕ್‌ನಲ್ಲಿ ಬೇಲದಕುಪ್ಪೆ ಮಹದೇಶ್ವರಸ್ವಾಮಿ ದೇವಾಲಯಕ್ಕೆ ತೆರಳಿ ವಾಪಸಾಗುತ್ತಿದ್ದಾಗ ಗಣೇಶಪುರ ಬಳಿ ಬೈಕ್‌ನ ಟೈರ್‌ ಸ್ಫೋಟವಾಗಿದೆ. ನಾಲ್ವರು ರಸ್ತೆಯಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಿಂಚನಾ ಸಾವನ್ನಪ್ಪಿದ್ದಾರೆ. ಸಿಂಚನಾ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಳು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *