ಉತ್ತರ ಕನ್ನಡ : ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿ ಭಾರೀ ಪ್ರಮಾಣದ ನಷ್ಟ ಅನುಭವಿಸಿದ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದಿದೆ. ಸಿದ್ದಾಪುರ ನಿವಾಸಿ ಹರ್ಷವರ್ಧನ್ (22) ಮೃತಪಟ್ಟ ಯುವಕನಾಗಿದ್ದು, ಆನ್ಲೈನ್ ಟ್ರೇಡಿಂಗ್ನಲ್ಲಿ ಉಂಟಾದ ಹಣಕಾಸಿನ ಮುಗ್ಗಟ್ಟೇ ಈ ತೀವ್ರ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ.ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಈ ಘಟನೆ ನಡೆದಿದೆ. ಮೃತಯುವಕನನ್ನು ಹರ್ಷವರ್ಧನ್ (22) ಎಂದು ಗುರುತಿಸಲಾಗಿದೆ.
ಹರ್ಷವರ್ಧನ್ ತನ್ನ ಮೊಬೈಲ್ ಮೂಲಕ ಸ್ಟಾಕ್ ಎಕ್ಸ್ಚೇಂಜ್ನಲ್ಲಿ ಟ್ರೇಡಿಂಗ್ ಮಾಡುತ್ತಿದ್ದನು. ಈ ಹೂಡಿಕೆಯಲ್ಲಿ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದರಿಂದ ತೀವ್ರ ಬೇಸರಗೊಂಡಿದ್ದ ಆತ, ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನ ತಂದೆ ಚಂದ್ರಶೇಖರ್ ನೀಡಿದ ದೂರಿನ ಮೇರೆಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

