Breaking News

ಅಂಗಡಿ ಪಾಲಾಗುತ್ತಿದ್ದ 400 ಕೆಜಿ ಅನ್ನ ಭಾಗ್ಯದ ಅಕ್ಕಿ ಅಧಿಕಾರಿಗಳಿಂದ ಜಪ್ತಿ

ಚಿಕ್ಕಮಗಳೂರು: ಅಂಗಡಿ ಪಾಲಾಗುತ್ತಿದ್ದ ಅನ್ನ ಭಾಗ್ಯದ ಅಕ್ಕಿಯನ್ನು ಅಧಿಕಾರಿಗಳು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ. ಜನರು ಅನ್ನಭಾಗ್ಯದಲ್ಲಿ ಸಿಕ್ಕ ಅಕ್ಕಿಯನ್ನು ಮಾರಾಟ ಮಾಡಲು ಮುಂದಾಗಿದ್ದು, ಆಟೋ ಚಾಲಕರೊಬ್ಬರು ಕ ತೇಗೂರು ಗ್ರಾಮದ ಜನರಿಂದ ಅನ್ನಭಾಗ್ಯದ ಅಕ್ಕಿ ಸಂಗ್ರಹಿಸಿ ಮಾರಾಟಕ್ಕೆ ಮುಂದಾಗಿದ್ದರು.ಆದರೆ ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ನಡೆಸಿ 4 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಅಕ್ಕಿಯನ್ನು ಆಟೋದಲ್ಲಿ ಸಾಗಿಸಲಾಗುತ್ತಿತ್ತು. ಈ ಅಕ್ಕಿಗೆ ಯಾವುದೇ ಬಿಲ್ ಇಲ್ಲದ ಕಾರಣ ಆಹಾರ ಇಲಾಖೆ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಜನರಿಂದ ಸಂಗ್ರಹಿಸಿದ ಅಕ್ಕಿಯನ್ನು ನಗರದ ಅಂಗಡಿಯೊಂದಕ್ಕೆ ಮಾರಾಟಕ್ಕೆ ಸಿದ್ಧತೆ ಮಾಡಲಾಗಿತ್ತು. ಅಕ್ಕಿ ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಚಿಕ್ಕಮಗಳೂರು ನಗರದ ಎನ್‌.ಎಂ.ಸಿ ವೃತ್ತದಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *