Breaking News

ಕಾರ್ಕಳ- ಚಿನ್ನಾಭರಣ ಕಳವು ಪ್ರಕರಣ ಬೇಧಿಸಿದ ಪೊಲೀಸರು, ಇಬ್ಬರು ಅರೆಸ್ಟ್

ಕಾರ್ಕಳ: ಪತ್ತೊಂಜಿ ಕಟ್ಟೆ ಎಂಬಲ್ಲಿ ಎಪ್ರಿಲ್ 23ರಂದು ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಪ್ರಕರಣವನ್ನು ಕಾರ್ಕಳ ನಗರ ಠಾಣೆಯ ಪೊಲೀಸರು ಬೇಧಿಸಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಬೈರಂಪಳ್ಳಿ ಗ್ರಾಮದ ಆನಂದ ಕುಲಾಲ್ (40) ಹಾಗೂ ಕಳವು ಮಾಡಿದ ಚಿನ್ನಾಭರಣವನ್ನು ಖರೀದಿಸಿದ ಜಯರಾಮ ಆಚಾರ್ಯ (54) ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು ಸುಮಾರು ರೂ. 5.60 ಲಕ್ಷ ಮೌಲ್ಯದ 39 ಗ್ರಾಂ ತೂಕದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎಪ್ರಿಲ್ 23ರಂದು ಪತ್ತೊಂಜಿಕಟ್ಟೆ ನಿವಾಸಿ ಶಂಕರ ಕುಲಾಲ್ ಎಂಬವರ ಮನೆಯಲ್ಲಿ ಈ ಕಳ್ಳತನ ಪ್ರಕರಣ ನಡೆದಿತ್ತು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Share News

About BigTv News

Check Also

ಬೆಚ್ಚಿಬಿದ್ದ ಯಾದಗಿರಿ; ಹಾಡಹಗಲೇ ಸಿನಿಮೀಯ ರೀತಿ ಪತ್ರಕರ್ತನ ಕಿಡ್ನಾಪ್!

ವಿಜಯಪುರ: ಹಾಡಹಗಲೇ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿ, ಕಾರಿನಲ್ಲಿ ಬಲವಂತವಾಗಿ ಅಪಹರಿಸಿಕೊಂಡು ಹೋದ ಘಟನೆ ನಗರದ ಲುಂಬಿನಿ ಪಾರ್ಕ್‌ ಎದುರು …

Leave a Reply

Your email address will not be published. Required fields are marked *