Breaking News

ಆದಿತ್ಯ ಮ್ಯಾಗೇರಿ ಆತ್ಯಹತ್ಯೆ: ವಿದ್ಯಾಗಿರಿ ಇನ್‌ಸ್ಪೆಕ್ಟರ್‌ ರಫಿಕ್‌ ಅಮಾನತು

ಧಾರವಾಡ: ಬಿಎಸ್‌.ಸಿ ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಯಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ವಿದ್ಯಾಗಿರಿ ಠಾಣೆಯ ಇನ್‌ಸ್ಪೆಕ್ಟರ್‌ ಮೊಹಮ್ಮದ್‌ ರಫಿಕ್‌ ತಹಶೀಲ್ದಾರ್‌ ಅವರನ್ನು ಅಮಾನತುಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಅಮಾನತಾದವರ ಸಂಖ್ಯೆ ನಾಲ್ಕಕ್ಕೆ ಏರಿದೆ. ‘ಗಾಂಜಾ ಪ್ರಕರಣದಲ್ಲಿ ಆದಿತ್ಯನ ವಿಚಾರಣೆ ನಡೆಸಿ ಪೊಲೀಸರು ₹ 2ಸಾವಿರ ಹಣ ಕೊಡುವಂತೆ ಪೊಲೀಸರು ಆತನಿಗೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದೆ. ವಿದ್ಯಾಗಿರಿ ಠಾಣೆಯ ಇನ್‌ಸ್ಪೆಕ್ಟರ್‌ ರಫಿಕ್‌ ಅವರನ್ನು ಅಮಾನತುಗೊಳಿಸಲಾಗಿದೆ’ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ್‌ ‘ಪ್ರಜಾವಾಣಿ’ಗೆ ತಿಳಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಗಿರಿ ಠಾಣೆಯ ಇಬ್ಬರು ಹೆಡ್‌ ಕಾನ್‌ಸ್ಟೆಬಲ್‌ಗಳು ಮತ್ತು ಒಬ್ಬರು ಕಾನ್‌ಸ್ಟೆಬಲ್‌ ಸಹಿತ ಮೂವರನ್ನು ಬುಧವಾರ ಅಮಾನತುಗೊಳಿಸಲಾಗಿತ್ತು.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *