ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಖಾನ್ ನಿವಾಸದಲ್ಲಿ ಚಿನ್ನಾಭರಣ ಕದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಶಿವಾಜಿನಗರ ಠಾಣೆ ಪೋಲೀಸರು ಇದೀಗ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಬಂಧಿತ ಆರೋಪಿಗಳನ್ನು ಸಯ್ಯದ್ ಅಮೀರ್ ಹಾಗೂ ಅಮೀರ್ ಅಹ್ಮದ್ ಎಂದು ತಿಳಿದು ಬಂದಿದೆ. ಬಿಜಿನೆಸ್ ಲಾಸ್ ಆಗಿದ್ದಕ್ಕೆ ಪರಿಚಯಸ್ಥರಿಂದಲೇ ಕಳ್ಳತನ ಮಾಡಿದ್ದಾರೆ. ಸೈಯದ್ ಜೊತೆಗೆ ಅಮೀರ್ ಅಹ್ಮದ್ ಟ್ರಾವೆಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದ. ಜಮೀರ್ ಮನೆಯಲ್ಲಿ ಸಯ್ಯದ್ ಮತ್ತು ಅಮೀರ್ ಇಬ್ಬರು ಕಳ್ಳತನ ಮಾಡಿದ್ದರು. ಮನೆಯಲ್ಲಿ ಬಂದು ಚಿನ್ನಾಭರಣ ಕಳ್ಳತನ ಮಾಡಿದ್ದರು. ಜಮೀರ್ ತಾಯಿಯ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಗಳು, 1.13 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದರು. ಚಿನ್ನ ಕಳ್ಳತನ ಮಾಡಿ ಆಭರಣ ಅಡವಿಟ್ಟು ಆರೋಪಿಗಳು ಹಣ ಪಡೆದಿದ್ದರು. ಆ ಹಣವನ್ನು ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಮಾಡಿ ಲಾಭಕ್ಕೆ ಪ್ಲಾನ್ ಮಾಡಿದರು. ಕಾಲ್ ಮಾಡಿದಾಗ ರಿಸೀವ್ ಮಾಡಲಿಲ್ಲ. ಇಬ್ಬರ ಮೇಲೆ ಅನುಮಾನ ವ್ಯಕ್ತವಾಗಿದೆ. ಸದ್ಯ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

