ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಕಡಂಗ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಉಂಟಾಗಿ ಹೋಟೆಲ್, ಮೊಬೈಲ್ ಅಂಗಡಿ, ಹಣ್ಣು, ತರಕಾರಿ ಅಂಗಡಿಗಳು ಭಸ್ಮವಾಗಿವೆ. ಇಲ್ಲಿಂದ ಸುಮಾರು 30 ಕಿ.ಮೀ ದೂರದ ಗೋಣಿಕೊಪ್ಪಲುವಿನಿಂದ ಅಗ್ನಿಶಾಮಕ ಅಧಿಕಾರಿಗಳು ಬಂದು ಬೆಂಕಿಯನ್ನು ಸಂಪೂರ್ಣ ನಂದಿಸಿದರು. ಅಷ್ಟರಲ್ಲಿ ಬಹುತೇಕ ವಸ್ತುಗಳು ಸುಟ್ಟು ಕರಕಲಾಗಿದ್ದವು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಟ್ಯಾಂಕರ್ ಮೂಲಕ ನೀರು ತಂದು ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದಾಗ್ಯೂ, ಬೆಂಕಿ ಕೆನ್ನಾಲಿಗೆ ನಿಯಂತ್ರಣ ಬರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಪ್ರಭಾರ ಠಾಣಾಧಿಕಾರಿ ಸುನಿಲ್ ಕುಮಾರ್, ಪ್ರಮುಖ ಅಗ್ನಿಶಾಮಕ ದೇವೇಂದ್ರಪ್ಪ, ಸಿಬ್ಬಂದಿ ಅರುಣ್, ಸಂತೋಷ್, ಹನುಮಂತಪ್ಪ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

