Breaking News

ಚಿಪ್ಪು ಹಂದಿ ಚಿಪ್ಪು ಸಾಗಾಣೆ; ಮೂವರ ಬಂಧನ

ಮಡಿಕೇರಿ: ಮಂಗಳೂರಿನ ಕದ್ರಿ ಉದ್ಯಾನದ ಬಳಿ ಚಿಪ್ಪುಹಂದಿಯ ಚಿಪ್ಪುಗಳನ್ನು ಮಾರಾಟಕ್ಕೆ ಯತ್ನಿಸಿದ ಆರೋಪ‍ದ ಮೇರೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರಿನ ಎಚ್‌.ಆರ್.ಜಗದೀಶ್ (50), ಬಾಬು (48) ಹಾಗೂ ಕನಕಪುರದ ಸಿದ್ದುನಾಯಕ (38) ಬಂಧಿತರು. ಇವರಿಂದ ಚಿಪ್ಪುಹಂದಿಯ 5,200 ಕೆ.ಜಿ ತೂಕದ ಚಿಪ್ಪು ಹಾಗೂ 1 ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಮಡಿಕೇರಿ ಸಿಐಡಿ ಅರಣ್ಯ ಘಟಕದ ಎಸ್.ಪಿ ಪವನ್ ನೆಜ್ಜೂರು ಅವರ ಮಾರ್ಗದರ್ಶನದಲ್ಲಿ ಮಂಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರ ದಳದ ಸಬ್‌ಇನ್‌ಸ್ಪೆಕ್ಟರ್ ಜಿ.ಆರ್. ದಿಲೀಪ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *