ಕುಂದಾಪುರ: ಸದಾಶಿವ ಕೋಟೆಕಾರ್ ಎಂಬುವರು ಬೆದರಿಸಿ, ಹಣಕ್ಕೆ ಬೆದರಿಕೆ ಹಾಕಿರುವುದಾಗಿ ಅರಣ್ಯ ಇಲಾಖೆಯಲ್ಲಿ ಅರಣ್ಯ ಗಸ್ತು ಪಾಲಕನಾಗಿರುವ ಆನಂದ ಬಳೆಗಾರ್ ದೂರು ನೀಡಿದ್ದಾರೆ.ಪ್ರಕರಣ ಸಂಬಂಧ ಆರೋಪಿ ಸದಾಶಿವ ಎಂಬಾತನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಮೇ 1 ರಂದು ಆರೋಪಿಯು ನನ್ನ ಇಲಾಖಾ ಸಮವಸ್ತ್ರಕ್ಕೆ ಕೈ ಹಾಕಿ, ನಿನ್ನ ಎಲ್ಲ ವಿಚಾರ ನನಗೆ ತಿಳಿದಿದೆ. ನನಗೆ 25 ಸಾವಿರ ರೂ. ಹಣ ಕೊಡಬೇಕು. ಇಲ್ಲದಿದ್ದರೆ ಎಲ್ಲ ವಿಚಾರ ಪ್ರಚಾರ ಮಾಡುತ್ತೇನೆಂದು ಬೆದರಿಸಿದ್ದಾರೆ. ಅನಂತರ ಮೇ 6 ರಂದು ಅಡ್ಡಹಾಕಿ 25 ಸಾವಿರ ರೂ. ಕೊಡದಿದ್ದರೆ ನಿನ್ನ ಎಲ್ಲ ವ್ಯವಹಾರ ಮಾಹಿತಿ ಹಕ್ಕಿನಲ್ಲಿ ಪಡೆದು, ಬಹಿರಂಗ ಪಡಿಸುವುದಾಗಿ ಬೆದರಿಕೆ ಹಾಕಿರುವುದಾಗಿ ಆನಂದ್ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

