ಕೊಡಿಗೇನಹಳ್ಳಿ: ಚಿನ್ನದ ಸರ ಕದ್ದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಹಿಂದುಪುರದ ಸುಜಾತಮ್ಮ ಶುಕ್ರವಾರ ಬೆಳಿಗ್ಗೆ ದೊಡ್ಡ ಹೊಸಹಳ್ಳಿಗೆ ಜಾತ್ರೆಗೆಂದು ಬಸ್ನಲ್ಲಿ ಹೋಗುತ್ತಿದ್ದಾಗ ಕೊಡಿಗೇನಹಳ್ಳಿ ಬಸ್ ನಿಲ್ದಾಣದಲ್ಲಿ ವಾಂತಿಯಾಗಿದೆ. ಆ ಸಂದರ್ಭದಲ್ಲಿ ಕತ್ತಿನಲ್ಲಿದ್ದ ನೆಕ್ಲೇಸ್ ಕೆಳಗೆ ಬಿದ್ದಿರುವುದು ತಿಳಿದಿರಲಿಲ್ಲ. ಸ್ವಲ್ಪ ದೂರ ಮುಂದೆ ಹೋದ ಮೇಲೆ ನೆಕ್ಲೇಸ್ ಇಲ್ಲದಿರುವುದು ಗೊತ್ತಾದ ತಕ್ಷಣ ಕೊಡಿಗೇನಹಳ್ಳಿಗೆ ವಾಪಸ್ ಬಂದು 16 ಗ್ರಾಂನ ನೆಕ್ಲೇಸ್ ಕಾಣೆಯಾಗಿರುವ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಅನುಮಾನಾಸ್ಪದವಾಗಿ ಕಂಡುಬಂದ ಗುಟ್ಟೆ ಗ್ರಾಮದ ಲಕ್ಷ್ಮಮ್ಮ ಅವರನ್ನು ಠಾಣೆಗೆ ಕರೆತಂದು ವಿಚಾರಿಸಿದಾಗ ಅವರ ಬಳಿ ನೆಕ್ಲೇಸ್ ಪತ್ತೆಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

