Breaking News

ಶ್ರೀರಂಗಪಟ್ಟಣ: 280 ಗ್ರಾಂ ಚಿನ್ನಾಭರಣ, ₹3.5ಲಕ್ಷ ನಗದು ಕಳವು

ಶ್ರೀರಂಗಪಟ್ಟಣ: ತಾಲ್ಲೂಕಿನ ನಗುವನಹಳ್ಳಿ ಗ್ರಾಮದ ವಿಜಯಕಮಾರ್‌ ಅವರ ಮನೆಯ ಬಾಗಿಲು ಮುರಿದು 280 ಗ್ರಾಂ ಚಿನ್ನಾಭರಣ ಹಾಗೂ ₹3.5ಲಕ್ಷ ನಗದು ಕಳವು ಮಾಡಿರುವ ಪ್ರರಕಣ ಬುಧವಾರ ತಡರಾತ್ರಿ ನಡೆದಿದೆ. ವಿಜಯಕಮಾರ್‌ ಕುಟುಂಬ ಸದಸ್ಯರು ಕಾರ್ಯನಿಮಿತ್ತ ಬೇರೆ ಊರಿಗೆ ಹೋಗಿದ್ದ ಸಂದರ್ಭದಲ್ಲಿ ಈ ಕೃತ್ಯ ನಡೆದಿದ್ದು, ಗುರುವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ ಎಂದು ವಿಜಯಕುಮಾರ್‌ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳ ಪತ್ತೆಗೆ ಕ್ರಮ ವಹಿಸಲಾಗಿದೆ ಎಂದು ಸಿಪಿಐ ಆನಂದಕುಮಾರ್‌ ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *