Breaking News

ಗಾಂಜಾ ಸೇವನೆ: ನಾಲ್ವರ ಬಂಧನ

ಮಂಗಳೂರು: ಶಕ್ತಿನಗರದ ರಾಜೀವ ನಗರ ಬಳಿ ಮತ್ತು ನಗರದ ಸೆಂಟ್ರಲ್‌ ರೈಲ್ವೇ ನಿಲ್ದಾಣ ಬಳಿ ಗಾಂಜಾ ಸೇವನೆ ಮಾಡಿದ ಆರೋಪದಡಿ ಎರಡು ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಶಕ್ತಿನಗರದ ರಾಜೀವನಗರ ಬಳಿ ಶಕ್ತಿನಗರ ಮುಗ್ರೋಡಿ ನಿವಾಸಿ ರಾಹುಲ್‌ (28) ಎಂಬಾತನನ್ನು ಮಂಗಳೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ನಗರದ ಸೆಂಟ್ರಲ್‌ ರೈಲು ನಿಲ್ದಾಣ ಬಳಿ ವೆಲೆನ್ಸಿಯಾ ಸೂಟರ್‌ಪೇಟೆ ನಿವಾಸಿ ಜೇಸನ್‌ ಮಾಡ್ತ (23), ಬಿಕರ್ನಕಟ್ಟೆ ಕಲ್ಪನೆ ನಿವಾಸಿ ನೆಲ್ಸನ್‌ (24) ಮತ್ತು ಮುಳಿಹಿತ್ಲು ಅರೇಕೇಬೆಟ್ಟು ನಿವಾಸಿ ಪ್ರತೀಕ್‌ (24)ರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *