ಯಾದಗಿರಿ: ಇತ್ತೀಚೆಗೆ ಲೋಕಾಯುಕ್ತವು ಪೊಲೀಸ್ ಮೇಲೆ ಜಾಸ್ತಿ ಕಣ್ಣಿಡುತ್ತಿದೆ. ಲಂಚ ಪಡೆಯುತ್ತಿರುವ ಸಂದರ್ಭದಲ್ಲೇ ಲೋಕಾಯಕ್ತ ಕೈಯಲ್ಲಿ ಸಿಕ್ಕಿಬೀಳುವ ಪೊಲೀಸ್ ಸಿಬ್ಬಂದಿ ಸಂಖ್ಯೆ ಜಾಸ್ತಿಯಾಗುತ್ತಿದೆ. ಇದೀಗ ಯಾದಗಿರಿ ಜಿಲ್ಲೆಯ ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವೀರಣ್ಣ ದೊಡ್ಡಮನಿ ಲೋಕಾಯುಕ್ತರ ಕೈಯಿಗೆ ಸಿಕ್ಕಿಬಿದ್ದಿದ್ದಾರೆ. ಇವರು ಸುಮಾರು 1 ಲಕ್ಷ ರೂಪಾಯಿ ಲಂಚ ಸ್ವೀಕಾರ ಮಾಡುತ್ತಿರುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ವೀರಣ್ಣ ದೊಡ್ಡಮನಿ ಅವರು ಕ್ರಿಮಿನಲ್ ಕೇಸ್ವೊಂದರ ತನಿಖೆ ಕೈಗೆತ್ತಿಕೊಂಡಿದ್ದರು. ಆದರೆ ಆರೋಪಿಗಳನ್ನ ಬಂಧಿಸದೆ ಇರಲು ಮತ್ತು ಕೇಸ್ ಕೈಬಿಡಲು 1 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಆದರೆ ಈ ಬಗ್ಗೆ ಆನಂದ್ ಎನ್ನುವವರು ದೂರು ನೀಡಿದ್ದರು. ಆನಂದ್ ನೀಡಿದ್ದ ಮಾಹಿತಿ ಅನ್ವಯ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದರು. ಲಂಚದ ಹಣದೊಂದಿಗೆ ಇನ್ಸ್ಪೆಕ್ಟರ್ ವೀರಣ್ಣ ಅವರನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಜಾಕೀರ್ ಇನಾಂದಾರ್ ಅವರ ನೇತೃತ್ವದ ತಂಡ ಈ ದಾಳಿಯನ್ನು ನಡೆಸಿದೆ. ಸದ್ಯ ಆರೋಪಿ ಇನ್ಸ್ಪೆಕ್ಟರ್ ವೀರಣ್ಣ ದೊಡ್ಡಮನಿಯನ್ನು ವಶಕ್ಕೆ ಪಡೆಯಲಾಗಿದ್ದು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

