ಶಿವಮೊಗ್ಗ: ಕಸಾಯಿಖಾನೆಗೆ ಕೊಂಡೊಯ್ದು ಕಡಿಯುವ ಉದ್ದೇಶದಿಂದ ಅಕ್ರಮವಾಗಿ ತಂದು ಇಲ್ಲಿನ ಸೂಳೇಬೈಲು ಈದ್ಗಾ ನಗರದ ಬಳಿ ಕಟ್ಟಿದ್ದ 12 ಎತ್ತುಗಳನ್ನು ತುಂಗಾ ನಗರ ಠಾಣೆ ಪೊಲೀಸರು ಮಂಗಳವಾರ ರಕ್ಷಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈದ್ಗಾ ನಗರದ ನಿವಾಸಿ, ಫಿಶ್ ಪ್ಲಾಂಟ್ನಲ್ಲಿ ಕೆಲಸ ಮಾಡುವ ಅಬ್ದುಲ್ ಅಜೀಜ್ (35) ಎಂಬಾತನನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ತುಂಗಾನಗರ ಠಾಣೆ ಇನ್ಸ್ಪೆಕ್ಟರ್ ಗುರುರಾಜ್ ಕರ್ಕಿ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

