ಶಿವಮೊಗ್ಗದಿಂದ ಹೊನ್ನಾವರಕ್ಕೆ ಹೊರಟಿದ್ದ ಕಾರು ತಾಲ್ಲೂಕಿನ ಸನ್ನಿವಾಸ ಮತ್ತು ತುಪ್ಪೂರು ನಡುವೆ ಬೆಂಕಿಗೆ ಆಹುತಿಯಾಗಿದೆ. ಶಿವಮೊಗ್ಗ ಸೋಮಿನಕೊಪ್ಪದ ನಿವಾಸಿ ಗುಡ್ಡೇಶ್ ಕಾರಿನಲ್ಲಿ ಹೊನ್ನಾವರಕ್ಕೆ ತೆರಳುವಾಗ ಈ ಘಟನೆ ನಡೆದಿದೆ. ಕಾರಿನ ಎಸಿ ಆನ್ ಮಾಡಿಕೊಂಡಿದ್ದು ಅದರಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ನಂತರ ಅಲ್ಲಿಯೇ ಬೆಂಕಿ ಕಾಣಿಸಿಕೊಂಡು ಇಡೀ ಕಾರಿಗೆ ವ್ಯಾಪಿಸಿ ಸಂಪೂರ್ಣ ಸುಟ್ಟು ಹೋಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

