Breaking News

ಚೌಡೇಶ್ವರಿ ರಸ್ತೆಯಲ್ಲಿ ಸ್ನೇಹಿತನಿಗೆ ಇರಿದು ಕೊಲೆ: ಆರೋಪಿ ಸೆರೆ

ಬೆಂಗಳೂರು: ಮೊಬೈಲ್ ವಿಚಾರಕ್ಕೆ ಸ್ನೇಹಿತರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮಾರತ್‌ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ರಾಮು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೇ 10ರಂದು ರಾಮು ಮತ್ತು ಪರಶುರಾಮ್‌ ಯಲ್ಲಪ್ಪ ಮಂಗಳಗಟ್ಟಿ(25) ನಡುವೆ ಮೊಬೈಲ್ ವಿಚಾರಕ್ಕೆ ಜಗಳವಾಗಿತ್ತು. ಮದ್ಯ ಸೇವಿಸಿ ಬಂದಿದ್ದ ರಾಮು, ಪರಶುರಾಮ್‌ ಅವರ ಮೊಬೈಲ್‌ನ್ನು ತಮಾಷೆಗೆಂದು ಬಚ್ಚಿಟ್ಟಿದ್ದ. ಬಳಿಕ ಇಬ್ಬರ ನಡುವೆ ವಾಗ್ವಾದ ನಡೆದು, ಸಿಟ್ಟಿಗೆದ್ದ ರಾಮು ಅಡುಗೆಮನೆಯ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಗಾಯಗೊಂಡ ಪರಶುರಾಮ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ಬಳಿಕ ಪರಾರಿಯಾಗಿದ್ದ ಆರೋಪಿಯನ್ನು ಮಾರತ್‌ಹಳ್ಳಿ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *