Breaking News

ಮದುವೆಯಾಗುವಂತೆ ಪೀಡಿಸುತ್ತಿದ್ದ ಪ್ರೇಯಸಿಯ ಹತ್ಯೆ

ಬೆಂಗಳೂರು: ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಮಹಿಳೆಯನ್ನು ಕೊಲೆ ಮಾಡಿ ಕೆರೆಯಲ್ಲಿ ಶವ ಎಸೆದ ಆರೋಪಿಯನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ರತನ್‌ ದಾಸ್‌(27) ಬಂಧಿತ ಆರೋಪಿ. ಅಂಜಲಿನಾಥ್‌(47) ಎಂಬ ಮಹಿಳೆ ಆರೋಪಿಯನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದಳು ಎನ್ನಲಾಗಿದೆ. ಇದರಿಂದ ಬೇಸತ್ತ ರತನ್‌, ಮಾತುಕತೆ ನೆಪದಲ್ಲಿ ತಿರುಪಾಳ್ಯ ಕೆರೆಯ ಬಳಿ ಕರೆಸಿ ಕತ್ತು ಹಿಸುಕಿ ಕೊಲೆ ಮಾಡಿ ಶವವನ್ನು ಕೆರೆಯಲ್ಲಿ ಎಸೆದು ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮೊದಲು ಅಸಹಜ ಸಾವು ಪ್ರಕರಣ ದಾಖಲಿಸಿದ್ದ ಪೊಲೀಸರು, ಮರಣೋತ್ತರ ಪರೀಕ್ಷಾ ವರದಿಯಲ್ಲಿ ಕೊಲೆ ದೃಢಪಟ್ಟ ಬಳಿಕ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *