Breaking News

ಮೈಸೂರಿನಲ್ಲಿ ಮೂವರು ಗಾಂಜಾ ಪೆಡ್ಲರ್‌ಗಳ ಬಂಧನ

ಮೈಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಪೆಡ್ಲರ್‌ಗಳನ್ನು ಆಲನಹಳ್ಳಿ ಪೊಲೀಸರು ಶನಿವಾರ ಬಂಧಿಸಿ ಆರೋಪಿಗಳಿಂದ 10.90 ಕೆ.ಜಿ. ತೂಕದ 5.05 ಲಕ್ಷ ರೂ. ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಉದಯಗಿರಿ ಬಳಿಯ ಕೆ.ಎನ್.ಪುರದ ಮಂಜುನಾಥ ಅಲಿಯಾಸ್ ತೋಟಿ ಮಂಜ, ಬೆಂಗಳೂರಿನ ಪಾಪರೆಡ್ಡಿಪಾಳ್ಯದ ಮಂಜುನಾಥ ಅಲಿಯಾಸ್ ಕುಂಟ ಮಂಜ, ನಾಗರಬಾವಿ ಬಳಿಯ ಮೂಡಲಪಾಳ್ಯ ನಿವಾಸಿ ಬಿ.ಆರ್.ಕಾರ್ತಿಕ್ ಬಂಧಿತ ಆರೋಪಿಗಳು. ಇವರು ಶನಿವಾರ ಶಾಂತವೇರಿ ಗೋಪಾಲಗೌಡ ನಗರದ ರಸ್ತೆಯಲ್ಲಿ ಕಾರು ನಿಲ್ಲಿಸಿಕೊಂಡು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಆರೋಪಿಗಳನ್ನು ಬಂಧಿಸಲಾಗಿದೆ. ಗಾಂಜಾ ಸಾಗಾಟಕ್ಕೆ ಬಳಕೆ ಮಾಡಿದ ಕಾರನ್ನು ವಶ ಪಡಿಸಿಕೊಳ್ಳಲಾಗಿದೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *