ಬ್ಯಾಂಕ್ ಕಾವಲುಗಾರರನ್ನು ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಮಾರ್ಪನಡ್ಕದಲ್ಲಿ ರವಿವಾರ ರಾತ್ರಿ ನಡೆದಿದೆ. ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್ ಕಾವಲುಗಾರ ಸುರೇಶ್ ( 42) ಕೊಲೆಗೀಡವಾದವರು. ಘಟನೆ ಬಗ್ಗೆ ಕಿರಣ್ , ಅಖಿಲೇಶ್ ಎಂಬವರ ವಿರುದ್ಧ ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ರವಿವಾರ ಸಂಜೆ ಕುಂಬ್ಡಾಜೆ ಗ್ರಾಮ ಪಂಚಾಯತ್ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟ ವೇಳೆ ನಡೆದ ಮಾತಿನ ಚಕಮಕಿಯೇ ಕೊಲೆಗೆ ಕಾರಣ ಎನ್ನಲಾಗಿದೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಆರೋಪಿಗಳು ಚಾಕುವಿನಿಂದ ಇರಿದಿದ್ದು, ಗಂಭೀರ ಗಾಯಗೊಂಡ ಸುರೇಶ್ ರನ್ನು ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ. ಘಟನೆ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

