Breaking News

ಕಾಸರಗೋಡು: ಚಾಕು ಇರಿದು ಬ್ಯಾಂಕ್ ಕಾವಲುಗಾರನ ಹತ್ಯೆ

ಬ್ಯಾಂಕ್ ಕಾವಲುಗಾರರನ್ನು ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಮಾರ್ಪನಡ್ಕದಲ್ಲಿ ರವಿವಾರ ರಾತ್ರಿ ನಡೆದಿದೆ. ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್ ಕಾವಲುಗಾರ ಸುರೇಶ್ ( 42) ಕೊಲೆಗೀಡವಾದವರು. ಘಟನೆ ಬಗ್ಗೆ ಕಿರಣ್ , ಅಖಿಲೇಶ್ ಎಂಬವರ ವಿರುದ್ಧ ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ರವಿವಾರ ಸಂಜೆ ಕುಂಬ್ಡಾಜೆ ಗ್ರಾಮ ಪಂಚಾಯತ್ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟ ವೇಳೆ ನಡೆದ ಮಾತಿನ ಚಕಮಕಿಯೇ ಕೊಲೆಗೆ ಕಾರಣ ಎನ್ನಲಾಗಿದೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಆರೋಪಿಗಳು ಚಾಕುವಿನಿಂದ ಇರಿದಿದ್ದು, ಗಂಭೀರ ಗಾಯಗೊಂಡ ಸುರೇಶ್ ರನ್ನು ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ. ಘಟನೆ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *