Breaking News

150 ಟನ್‌ಗೂ ಅಧಿಕ ಅಕ್ರಮ ಮರಳು ಜಪ್ತಿ

ತೀರ್ಥಹಳ್ಳಿ: ಅಗ್ರಹಾರ ಹೋಬಳಿಯ ಅಗಳಬಾಗಿಲು ಗ್ರಾಮದ ಸದಾಶಿವ ದೇವಸ್ಥಾನದ ಸಮೀಪ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಅಂದಾಜು 150 ಟನ್‌ಗಿಂತ ಹೆಚ್ಚು ಮರಳನ್ನು ತಹಶೀಲ್ದಾರ್ ಎಸ್. ರಂಜಿತ್ ನೇತೃತ್ವದಲ್ಲಿ ಬುಧವಾರ ದಾಳಿ ನಡೆಸಿ ಜಪ್ತಿ ಮಾಡಲಾಗಿದೆ. ಸರ್ಕಾರದ ಜಾಗ ದುರುಪಯೋಗ ಮಾಡಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಸ್ಥಳ ಪರಿಶೀಲಿಸಿ ಜೆಸಿಬಿ ಯಂತ್ರದ ಸಹಾಯದಿಂದ ಅಕ್ರಮ ಮರಳನ್ನು ವಶಕ್ಕೆ ಪಡೆಯಲಾಯಿತು ಎಂದು ತಹಶೀಲ್ದಾರ್ ತಿಳಿಸಿದರು. ಪಿಡಿಒ ಮಂಜುನಾಥ್, ಗ್ರಾಮ ಆಡಳಿತಾಧಿಕಾರಿ ಸಿದ್ಧಾರೂಢ ಇದ್ದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *