ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಉಲ್ಲಾಸನಗರ ಪ್ರದೇಶದಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಇಬ್ಬರು ಸಹೋದರರು ಸಾವನ್ನಪ್ಪಿ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ರಾತ್ರಿ ಸುಮಾರು 8.30ರ ವೇಳೆಗೆ ಕೈಲಾಶ್ ಕಾಲೋನಿಯಲ್ಲಿ ಈ ದಾಳಿ ನಡೆದಿದ್ದು, ದುಷ್ಕರ್ಮಿಗಳು ಸುಮಾರು 15 ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯಲ್ಲಿ ಇಬ್ಬರು ಸಹೋದರರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಮತ್ತೊಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ತಿಳಿಯುತ್ತಿದ್ದಂತೆಯೇ ಹಿಲ್ ಲೈನ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪ್ರದೇಶವನ್ನು ಸುತ್ತುವರಿದು ಭದ್ರತೆ ಹೆಚ್ಚಿಸಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ ಹಳೆಯ ವೈಷಮ್ಯವೇ ದಾಳಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿರುವ ಪೊಲೀಸರು ಆರೋಪಿಗಳನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಿ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

