ರಾಣೆಬೆನ್ನೂರು: ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾರಾಟ ಮಾಡುವ ಅಡ್ಡೆಯ ಮೇಲೆ ದಾಳಿ ನಡೆಸಿದ ಶಹರ ಠಾಣೆ ಪೊಲೀಸರು 50 ಕೆ.ಜಿ. ತೂಕದ ಮಾಂಸ ವಶಪಡಿಸಿಕೊಂಡ ಘಟನೆ ಇಲ್ಲಿಯ ಇಸ್ಲಾಂಪುರ ಓಣಿಯಲ್ಲಿ ನಡೆದಿದೆ.ಯಾರೋ ಆರೋಪಿತರು ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾರಾಟ ಮಾಡಲು ಮುಂದಾಗಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮಾಂಸ, ಕಬ್ಬಿಣದ ಚಾಕು, ಮಾಂಸ ನೇತು ಹಾಕುವ ಹುಕ್ಕುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

