Breaking News

ಬಂಧನದ ಬಳಿಕ ಬಾಯ್ಬಿಟ್ಟ ಟಿಎಂಸಿ ನಾಯಕ’ ನೆಲದೊಳಗೆ ಹೂತಿಟ್ಟಿದ್ದ ಹಣದ ಚೀಲ ಪತ್ತೆ!

ಪಶ್ಚಿಮ ಬಂಗಾಳದ ಬದುರಿಯಾ ದಲ್ಲಿರುವ ತೃಣಮೂಲ ಕಾಂಗ್ರೆಸ್‌ ಕಚೇರಿ ಬಳಿ ಭೂಗತವಾಗಿ ಹಲವು ಚೀಲಗಳಲ್ಲಿ ತುಂಬಿಡಲಾಗಿದ್ದ 500 ರು. ಮುಖಬೆಲೆಯ ನೋಟುಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ದೀಪಂಕರ್ ಭಟ್ಟಾಚಾರ್ಯ ಬಂಧನ ಬಳಿಕ ನಡೆದ ಶೋಧಸರ್ಕಾರದ ಪರಿಹಾರ ಯೋಜನೆಯಲ್ಲಿ ಅವ್ಯವಹಾರ ಮತ್ತು ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಟಿಎಂಸಿ ಹಿರಿಯ ನಾಯಕ ಮತ್ತು ಬದುರಿಯಾ ಪುರಸಭೆ ಅಧ್ಯಕ್ಷ ದೀಪಂಕರ್ ಭಟ್ಟಾಚಾರ್ಯ ಬಂಧನ ಬಳಿಕ ನಡೆದ ಶೋಧ ಕಾರ್ಯಾಚರಣೆ ವೇಳೆ ಹಣದ ಚೀಲಗಳು ಪತ್ತೆಯಾಗಿವೆ. ಅನುಮಾನಸ್ಪದ ಚಟುವಟಿಕೆ
ಮಂಗಳವಾರ ತಡರಾತ್ರಿ ಪಕ್ಷದ ಕಚೇರಿ ಸಮೀಪ ಅನುಮಾನಸ್ಪದ ಚಟುವಟಿಕೆ ಕಂಡುಬಂದ ಹಿನ್ನೆಲೆ ಬುಧವಾರ ಪೊಲೀಸರು ಟಿಎಂಸಿ ಕಚೇರಿ ಬಳಿ ಶೋಧ ನಡೆಸಿದ್ದಾರೆ. ಈ ವೇಳೆ ಹೂತಿಟ್ಟಿದ್ದ 500 ರು.ನೋಟುಗಳ ಬಂಡಲ್‌ಗಳನ್ನು ಪತ್ತೆಹಚ್ಚಿದ್ದು, 4 ದೊಡ್ಡ ಚೀಲಗಳನ್ನು ಪೊಲೀಸರು ಹೊತ್ತುಕೊಂಡು ಹೋಗುತ್ತಿರುವ ದೃಶ್ಯಗಳು ಸೆರೆಯಾಗಿದೆ. ಕೋಟ್ಯಂತರ ಹಣವಿರುವ ಶಂಕೆ ವ್ಯಕ್ತವಾಗಿದ್ದು, ನಿಖರ ಮೊತ್ತ ಪತ್ತೆಯಾಗಿಲ್ಲ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *