ದೊಡ್ಡಬಳ್ಳಾಪುರ: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದೆ ಗೋವುಗಳನ್ನು ಸಾಗಿಸುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದು, ಗೋವುಗಳನ್ನು ವಶಕ್ಕೆ ಪಡೆದಿದ್ದಾರೆ. ಗೌರಿಬಿದನೂರಿನಿಂದ ದಾಬಸ್ಪೇಟೆ ಕಡೆಗೆ ಸರಕು ಸಾಗಣೆ ವಾಹನದಲ್ಲಿ ನಾಲ್ಕು ಸೀಮೆ ಹಸುಗಳನ್ನು ಸಾಗಿಸಲಾಗುತ್ತಿತು. ಕಂಟನಕುಂಟೆ ರಸ್ತೆಯಲ್ಲಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಸೂಕ್ತ ದಾಖಲೆ ಇಲ್ಲದೆ ಗೋವುಗಳನ್ನು ಕಸಾಯಿ ಖಾನೆಗೆ ಸಾಗಿಸುತ್ತಿದ್ದದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗೋವುಗಳನ್ನು ಗೋ ಶಾಲೆಗೆ ಬಿಡಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಇನ್ಸ್ಪೆಕ್ಟರ್ ಎಂ.ಬಿ. ನವೀನ್ಕುಮಾರ್ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

