ವಿಜಯಪುರ ನಗರದ ರಾಂಪೂರೆ ಕಾಲೊನಿಯಲ್ಲಿ ಯುವ ಕ್ಯಾಷಿಯರ್ ಲಕ್ಷ್ಮೀಕಾಂತ್ ಬಸವರಾಜ ಮಠಪತಿ (22) ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಖಾಸಗಿ ಮಾಲ್ನ ವ್ಯವಸ್ಥಾಪಕ ಕಿರುಕುಳ ನೀಡುತ್ತಿದ್ದನೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹಣದ ದುರುಪಯೋಗದ ಆರೋಪ ಮಾಡಿ ವ್ಯವಸ್ಥಾಪಕ ಕಿಶೋರ್ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂದು ಮೃತನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಯುವಕ ತನ್ನ ಕುಟುಂಬದವರೊಂದಿಗೆ ಮಾತನಾಡಿದ್ದು, ಸಹೋದರನಿಗೆ ಧ್ವನಿ ಸಂದೇಶವನ್ನೂ ಕಳುಹಿಸಿದ್ದಾನೆ ಎನ್ನಲಾಗಿದೆ. ಪ್ರಕರಣ ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಘಟನೆಯ ಬಳಿಕ ಕುಟುಂಬಸ್ಥರು ಹಾಗೂ ಸ್ನೇಹಿತರು ಮಾಲ್ ಎದುರು ಪ್ರತಿಭಟನೆ ನಡೆಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

