Breaking News

ಮುರುಡೇಶ್ವರ ಪ್ರವಾಸ ದುರಂತದಲ್ಲಿ ಅಂತ್ಯ! ಸ್ನಾನಕ್ಕೆ ಇಳಿದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಸಂಕದಗುಂಡಿ ಹೊಳೆಯಲ್ಲಿ ಸ್ನಾನಕ್ಕೆ ಇಳಿದಿದ್ದ ಹಾವೇರಿ ಮೂಲದ 16 ವರ್ಷದ ವಿದ್ಯಾರ್ಥಿ ಆಯುಷ್ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಆಯುಷ್ ಕುಟುಂಬ ಸದಸ್ಯರೊಂದಿಗೆ ಮುರುಡೇಶ್ವರ ಹಾಗೂ ಕನ್ಯಾಕುಮಾರಿ ಪ್ರವಾಸಕ್ಕೆ ಬಂದಿದ್ದನು. ಮುರುಡೇಶ್ವರ ಪ್ರವಾಸ ಮುಗಿಸಿ ಶಿರೂರು ಸಂಕದಗುಂಡಿ ಹೊಳೆಯ ಬಳಿ ವಿಶ್ರಾಂತಿಗಾಗಿ ತಂಗಿದ್ದ ವೇಳೆ ಕುಟುಂಬದವರು ಊಟದ ಸಿದ್ಧತೆಯಲ್ಲಿ ನಿರತರಾಗಿದ್ದರು. ಈ ವೇಳೆ ಆಯುಷ್ ಮತ್ತೊಬ್ಬ ಬಾಲಕನೊಂದಿಗೆ ಹೊಳೆಗೆ ಸ್ನಾನಕ್ಕೆ ತೆರಳಿದ್ದಾನೆ. ಈಜಲು ಹೋಗಿದ್ದಾಗ ಆಳವಾದ ನೀರಿಗೆ ಸಿಲುಕಿ ಮುಳುಗಿದ್ದಾನೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಸುಮಾರು ಒಂದು ಗಂಟೆಯ ಬಳಿಕ ಮೃತದೇಹವನ್ನು ಮೇಲಕ್ಕೆತ್ತಿದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬೈಂದೂರು ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *