ನೆಲಮಂಗಲ ತಾಲೂಕಿನ ಟಿ.ಬೇಗೂರಿನ ಮಹಾಲಕ್ಷ್ಮೀ ಜ್ಯುವೆಲರ್ಸ್ಗೆ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನದ ಉಂಗುರಗಳನ್ನು ದೋಚಿ ಪರಾರಿಯಾಗಿದ್ದಾರೆ. ಅಂಗಡಿಯಲ್ಲಿದ್ದವರನ್ನು ಡ್ಯಾಗರ್ ತೋರಿಸಿ ಬೆದರಿಸಿದ ಆರೋಪಿಗಳು ಉಂಗುರಗಳಿದ್ದ ಟ್ರೇ ಕಸಿದುಕೊಂಡು ಪರಾರಿಯಾಗಿದ್ದು, ಈ ವೇಳೆ ಕೆಲವು ಉಂಗುರಗಳು ರಸ್ತೆಗೆ ಬಿದ್ದಿವೆ ಎನ್ನಲಾಗಿದೆ. ಒಟ್ಟು 5 ಚಿನ್ನದ ಉಂಗುರಗಳು ಕಳುವಾಗಿದ್ದು, ಅವುಗಳ ತೂಕ ಸುಮಾರು 35 ಗ್ರಾಂ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಗ್ರಾಮಾಂತರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ. ಸ್ಥಳೀಯರು ಹೆಚ್ಚುತ್ತಿರುವ ದರೋಡೆ ಪ್ರಕರಣಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

