Breaking News

ಬಂಗಾರಪೇಟೆ: ಕಾರ್ ಗ್ಯಾರೇಜ್‌ನಲ್ಲಿ ಭೀಕರ ಅಗ್ನಿ ಅವಘಡ; 5 ಕಾರುಗಳು ಭಸ್ಮ

ಕೋಲಾರ: ಬಂಗಾರಪೇಟೆ ತಾಲೂಕಿನ ಎಸ್.ಜಿ ಕೋಟೆ ಸಮೀಪದ ಚೌಡೇಶ್ವರಿ ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಭಾನುವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಐದು ಕಾರುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಮಾಲೀಕ ಈರಣ್ಣ ಅವರಿಗೆ ಸೇರಿದ ಗ್ಯಾರೇಜ್‌ನಲ್ಲಿ ತಡರಾತ್ರಿ ಹಠಾತ್ ಬೆಂಕಿ ಹೊತ್ತಿಕೊಂಡಿದ್ದು, ಒಳಗೆ ನಿಲ್ಲಿಸಿದ್ದ ಮೂರು ಕಾರುಗಳು ಸಂಪೂರ್ಣವಾಗಿ ಭಸ್ಮವಾಗಿವೆ. ಗ್ಯಾರೇಜ್ ಹೊರಭಾಗದಲ್ಲಿ ನಿಲ್ಲಿಸಿದ್ದ ಇನ್ನೂ ಎರಡು ಕಾರುಗಳಿಗೆ ಭಾಗಶಃ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಸಮಯದಲ್ಲಿ ಸರ್ವಿಸ್ ಸೆಂಟರ್‌ನಲ್ಲಿ ಸಿಬ್ಬಂದಿ ಯಾರೂ ಇಲ್ಲದಿದ್ದ ಕಾರಣ ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ ಲಕ್ಷಾಂತರ ರೂಪಾಯಿ ಮೌಲ್ಯದ ವಾಹನಗಳು ಹಾಗೂ ಆಸ್ತಿಪಾಸ್ತಿ ನಾಶವಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳೀಯರಿಂದ ಮಾಹಿತಿ ದೊರೆತ ತಕ್ಷಣ ಬಂಗಾರಪೇಟೆ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ. ಬಳಿಕ ಬಂಗಾರಪೇಟೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಅಗ್ನಿ ಅವಘಡದ ನಿಖರ ಕಾರಣ ತಿಳಿಯಲು ತನಿಖೆ ಆರಂಭಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *