Breaking News

ವಿಜಯಪುರದಲ್ಲಿ ಹೋಟೆಲ್‌ಗೆ ಬೆಂಕಿ: ಮೂವರು ಸಾವು

ಪಟ್ಟಣದ ಕತ್ರಿ ಬಜಾರದ ಹನುಮಾನ ಮಂದಿರದ ಸಮೀಪದ ‘ಭೂಮಿಕಾ’ ಹೋಟೆಲ್‌ನಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೇ 29ರಂದು ಬೆಳಿಗ್ಗೆ ನಡೆದ ಘಟನೆಯಲ್ಲಿ ಹೋಟೆಲ್ ಮಾಲೀಕ ಬಸವರಾಜ ಕುಂಬಾರ ಅವರು ಉಪಹಾರ ಮತ್ತು ಚಹಾ ತಯಾರಿಸಲು ಎಲ್‌ಪಿಜಿ ಗ್ಯಾಸ್ ಸ್ಟೌ ಹಚ್ಚುವ ವೇಳೆ ಅನಿಲ ಸೋರಿಕೆಯಾಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಈ ಅವಘಡದಲ್ಲಿ ಹೋಟೆಲ್‌ನಲ್ಲಿದ್ದ ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದರು. ತೀವ್ರ ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಸೀರ್ ಅಹಮ್ಮದ್ ಕಡದರಾಳ (42), ಶಕೀಲ್ ಅಹಮ್ಮದ್ ಕುಂಬಾರವಾಡಿ (35) ಹಾಗೂ ರಾಜಕುಮಾರ ಗೋಟಗುಣಕಿ (71) ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಉಳಿದ ಐವರು ಚಿಕಿತ್ಸೆ ಪಡೆದು ಜೀವಾಪಾಯದಿಂದ ಪಾರಾಗಿದ್ದಾರೆ.

Share News

About BigTv News

Check Also

ಬೆಚ್ಚಿಬಿದ್ದ ಯಾದಗಿರಿ; ಹಾಡಹಗಲೇ ಸಿನಿಮೀಯ ರೀತಿ ಪತ್ರಕರ್ತನ ಕಿಡ್ನಾಪ್!

ವಿಜಯಪುರ: ಹಾಡಹಗಲೇ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿ, ಕಾರಿನಲ್ಲಿ ಬಲವಂತವಾಗಿ ಅಪಹರಿಸಿಕೊಂಡು ಹೋದ ಘಟನೆ ನಗರದ ಲುಂಬಿನಿ ಪಾರ್ಕ್‌ ಎದುರು …

Leave a Reply

Your email address will not be published. Required fields are marked *