Breaking News

ಶಿವಮೊಗ್ಗ: ಬೆಕ್ಕುಗಳ ಕಾದಾಟಕ್ಕೆ ನೆರೆಮನೆಯವರ ಹೊಡೆದಾಟ: 20 ಮಂದಿ ವಿರುದ್ಧ ಕೇಸ್‌!

ತೀರ್ಥಹಳ್ಳಿ(ಶಿವಮೊಗ್ಗ): ಬೆಕ್ಕುಗಳ ನಡುವೆ ಜಗಳವಾಗಿದ್ದಕ್ಕೆ ಅಕ್ಕಪಕ್ಕದ ಮನೆಯವರ ಮಧ್ಯೆ ಮಾತಿನ ಚಕಮಕಿ ನಡೆದು ಒಬ್ಬರಿಗೊಬ್ಬರು ಹೊಡೆದಾಡಿಕೊಂಡು ಪೊಲೀಸ್‌ ಠಾಣೆ ಮೆಟ್ಟಿಲೇರಿರುವ ಘಟನೆ ಮಂಗಳವಾರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯಲ್ಲಿ ನಡೆದಿದೆ. ನಾಗಪಾತ್ರಿ ರಾಜಶೇಖರ್‌ ಅವರಿಗೆ ಸೇರಿದ್ದ ವಿದೇಶಿ ಬೆಕ್ಕಿಗೆ ನಾಗರಾಜ ಅವರ ಮನೆಯ ಬೆಕ್ಕು ಕಚ್ಚಿದ ವಿಚಾರದಲ್ಲಿ ಎರಡು ಮನೆಯವರ ನಡುವೆ ಮಾತಿನ ಚಕಮಕಿ ನಡೆದು ಜಗಳವಾಗಿದೆ. ಘಟನೆಯಲ್ಲಿ ನಾಗಪಾತ್ರಿ ರಾಜಶೇಖರ್‌ ಮತ್ತು ನೆರೆಮನೆಯ ಮೇಘನಾ ಎಂಬ ಯುವತಿಗೆ ಪೆಟ್ಟು ಬಿದ್ದಿದ್ದು ಇಬ್ಬರನ್ನೂ ಪಟ್ಟಣದ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ 20 ಜನರ ವಿರುದ್ಧ ದೂರು ದಾಖಲಾಗಿದೆ. ನಾಗಪಾತ್ರಿ ರಾಜಶೇಖರ ಅವರು 16 ಜನರ ವಿರುದ್ಧ ದೂರು ನೀಡಿದ್ದಾರೆ. ಇದರ ಪ್ರತಿಯಾಗಿ ನಾಗರಾಜ ಅವರೂ 4 ಮಂದಿ ವಿರುದ್ಧ ದೂರು ನೀಡಿದ್ದಾರೆ. ಘಟನೆ ಸಂಬಂಧ ನಾಗರಾಜ ಎಂಬುವವರನ್ನು ಪೊಲೀಸರು ಬಂಧಿಸಿದ್ದು ಉಳಿದವರು ತಪ್ಪಿಸಿಕೊಂಡಿದ್ದಾರೆ. ಘಟನೆ ಸಂಬಂಧ 2 ಮನೆಯವರ ವಿರುದ್ಧ ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *