ಕೊಳ್ಳೇಗಾಲದ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಸಮೀಪದ ಕಾವೇರಿ ನದಿ ದಡದಲ್ಲಿ ಜೀವಂತ ಉಡವನ್ನು ಅಕ್ರಮವಾಗಿ ಸಾಗಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸಿಐಡಿ ಅರಣ್ಯ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರು ಮೈಸೂರು ಜಿಲ್ಲೆಯ ಹುಣಸೂರು ಮೂಲದ ಮುಕ್ತಾರ್ ಪಾಶ (45) ಮತ್ತು ರಫೀ (44) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಜೀವಂತ ಉಡ ಹಾಗೂ ಕಬ್ಬಿಣದ ಪಂಜರವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದು, ಕಾರ್ಯಾಚರಣೆಯಲ್ಲಿ ಕೊಳ್ಳೇಗಾಲ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

