ಮಡಿಕೇರಿ: ಅಬ್ಬಿ ಜಲಪಾತ ವೀಕ್ಷಣೆಗೆ ಬಂದಿದ್ದ ಬೆಂಗಳೂರು ಮೂಲದ ಪ್ರವಾಸಿಗರ ತಂಡ ಹಾಗೂ ಖಾಸಗಿ ಹೋಟೆಲ್ ಮಾಲೀಕರ ನಡುವೆ ಚಿಪ್ಸ್ ತೆಗೆದುಕೊಂಡ ವಿಚಾರಕ್ಕೆ ವಾಗ್ವಾದ ನಡೆದಿದೆ. ಗಲಾಟೆ ತೀವ್ರಗೊಂಡ ಬಳಿಕ ಹೋಟೆಲ್ ಮಾಲೀಕ ಆಗ್ನೇಶ್, ಪ್ರವಾಸಿಗರು ತನ್ನ ಹಾಗೂ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಇನ್ನೊಂದೆಡೆ, ಹೋಟೆಲ್ ಮಾಲೀಕನೇ ಪ್ರವಾಸಿಗರನ್ನು ಬೆದರಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಪ್ರಕರಣದ ನಿಜಾಂಶ ತಿಳಿಯಲು ಸಿಸಿಟಿವಿ ದೃಶ್ಯಗಳು ಹಾಗೂ ಇತರೆ ಸಾಕ್ಷ್ಯಾಧಾರಗಳ ಪರಿಶೀಲನೆಗೆ ಒತ್ತಾಯ ವ್ಯಕ್ತವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

