Breaking News

ಕಲಬುರಗಿಯ ಸರ್ಕಾರಿ ಕಚೇರಿಯಲ್ಲಿ ಕಳ್ಳತನಕ್ಕೆ ಯತ್ನ, ಲಾಕರ್ ಎತ್ತಲಾಗದೇ ಬಿಟ್ಟೋಡಿದ ಕಳ್ಳರು!

ಆಳಂದ ಪಟ್ಟಣದ ಅಂಚೆ ಕಚೇರಿ ಹಾಗೂ ಎಪಿಎಂಸಿ ಆಡಳಿತ ಕಚೇರಿಯಲ್ಲಿ ಮಧ್ಯರಾತ್ರಿ ಕಳ್ಳತನಕ್ಕೆ ಯತ್ನ ನಡೆದಿದ್ದು, ಲಕ್ಷಾಂತರ ರೂಪಾಯಿ ನಗದು ಅದೃಷ್ಟವಶಾತ್ ಕಳ್ಳರ ಕೈಗೆ ಸಿಗದೆ ಉಳಿದಿದೆ. ಅಂಚೆ ಕಚೇರಿಯಲ್ಲಿದ್ದ ಸುಮಾರು 5 ಲಕ್ಷ ರೂಪಾಯಿ ಹಣವಿದ್ದ ಖಜಾನೆ ಪೆಟ್ಟಿಗೆಯನ್ನು ಕಳ್ಳರು ಹೊರಗೆ ಎಳೆದೊಯ್ದರೂ, ಅದರ ಭಾರದಿಂದ ಅರ್ಧದಾರಿಯಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಕಳ್ಳರು ಕಚೇರಿಯ ದಾಖಲೆ ಪತ್ರಗಳನ್ನು ಚೆಲ್ಲಾಪಿಲ್ಲಿಗೊಳಿಸಿದ್ದು, ಪಕ್ಕದ ಎಪಿಎಂಸಿ ಕಚೇರಿಯ ಬೀಗ ಮುರಿದು ಅಲ್ಲಿಯೂ ಶೋಧ ನಡೆಸಿದ್ದಾರೆ. ಆದರೆ ಯಾವುದೇ ನಗದು ಅಥವಾ ಪ್ರಮುಖ ವಸ್ತುಗಳು ಕಳುವಾಗಿರುವ ಬಗ್ಗೆ ವರದಿಯಾಗಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿರುವ ಪೊಲೀಸರು ಕಳ್ಳರ ಪತ್ತೆಗೆ ಮುಂದಾಗಿದ್ದಾರೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ಸರ್ಕಾರಿ ಕಚೇರಿಗಳ ಭದ್ರತೆ ಮತ್ತು ರಾತ್ರಿ ಗಸ್ತು ಹೆಚ್ಚಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *