Breaking News

ಬೆಂಗಳೂರು: ಹಲ್ಲೆ ನಡೆಸಿ ಆಭರಣ ದೋಚಿದ್ದ ಆರೋ‍ಪಿ ಸೆರೆ

ಬೆಂಗಳೂರು: ಮನೆಗೆ ನುಗ್ಗಿ ಗೃಹಿಣಿಯ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಹಾಗೂ ಮೊಬೈಲ್ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಗೇನಹಳ್ಳಿಯ ಅಸ್ಲಂ ಪಾಷಾ ಬಂಧಿತನಾಗಿದ್ದು, ಆತನಿಂದ ₹6.70 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಸಿಐಎಲ್ ಲೇಔಟ್ ನಿವಾಸಿ ಜಯಶ್ರೀ ಅವರ ಮನೆಗೆ ನುಗ್ಗಿ ಕೃತ್ಯ ಎಸಗಿದ್ದ ಎನ್ನಲಾಗಿದೆ. ಮನೆಯ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಬಳ್ಳಾರಿಯಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ : ಅತ್ಯಾಚಾರವೆಸಗಿ ಕೊಲೆ ಮಾಡಿರೋ ಶಂಕೆ!

ಬಳ್ಳಾರಿಯ ಅಂದ್ರಾಳ ಹಳ್ಳದಲ್ಲಿ ಬ್ಯಾಂಕ್ ಉದ್ಯೋಗಿ ಅನಿಷ ಫಾತಿಮಾ (38) ಅವರ ಮೃತದೇಹ ನಿಗೂಢವಾಗಿ ಪತ್ತೆಯಾಗಿದ್ದು, ಪ್ರಕರಣ ಜಿಲ್ಲೆಯಲ್ಲಿ ಆತಂಕ …

Leave a Reply

Your email address will not be published. Required fields are marked *