Breaking News

ಬೃಹತ್ ಚಿನ್ನ ಕಳ್ಳಸಾಗಾಣಿಕೆ ಜಾಲ : ಬಿಜೆಪಿ ಮುಖಂಡ ಸೇರಿ ಏಳು ಮಂದಿ ಬಂಧನ

ಮುಂಬೈ ವಿಮಾನ ನಿಲ್ದಾಣದಲ್ಲಿ ನಡೆದ ಭಾರಿ ಚಿನ್ನ ಕಳ್ಳಸಾಗಣೆ ಪ್ರಕರಣವನ್ನು ಭೇದಿಸಿರುವ ಡಿಆರ್‌ಐ ಅಧಿಕಾರಿಗಳು, ಬಿಜೆಪಿ ಮುಖಂಡ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಮೇಣದಲ್ಲಿ ಮಿಶ್ರಣ ಮಾಡಿದ್ದ ಚಿನ್ನದ ಪುಡಿಯನ್ನು ವಶಪಡಿಸಿಕೊಳ್ಳಲಾಗಿದ್ದು, ಅದರ ಮೌಲ್ಯ ಸುಮಾರು ₹5 ಕೋಟಿ ಎಂದು ಅಂದಾಜಿಸಲಾಗಿದೆ. ಖಚಿತ ಮಾಹಿತಿಯ ಮೇರೆಗೆ ವಿಮಾನ ನಿಲ್ದಾಣದ ಸಮೀಪದ ಹೋಟೆಲ್ ಮೇಲೆ ನಿಗಾ ಇಟ್ಟಿದ್ದ ಅಧಿಕಾರಿಗಳು, ಚಿನ್ನ ಸಾಗಾಟದ ವೇಳೆ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ವಿಮಾನ ನಿಲ್ದಾಣ ಸೇವಾ ಸಂಸ್ಥೆಯ ಮೂವರು ಸಿಬ್ಬಂದಿ, ಇಬ್ಬರು ವಿದೇಶಿ ಪ್ರಜೆಗಳು ಹಾಗೂ ಬಿಜೆಪಿ ಮುಖಂಡ ಅಜಿತ್ ಅಚರೇಕರ್ ಸೇರಿದ್ದಾರೆ. ವಿಚಾರಣೆ ವೇಳೆ ಕಪ್ಪು ಕಾಲುಚೀಲದಲ್ಲಿ ಅಡಗಿಸಿಟ್ಟಿದ್ದ ಕ್ಯಾಪ್ಸೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳಲ್ಲಿ ಮೇಣದೊಂದಿಗೆ ಮಿಶ್ರಣ ಮಾಡಿದ್ದ ಚಿನ್ನದ ಪುಡಿ ಪತ್ತೆಯಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *