ಬೆಂಗಳೂರು: ಸೂಪರ್ ಮಾರ್ಕೆಟ್ಗೆ ನುಗ್ಗಿ ದರೋಡೆಗೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ಆಸೀಫ್ (22), ಸೈಯದ್ ಸಲೀಂ (26) ಹಾಗೂ ಸಿದ್ದಿಕ್ ಪಾಷಾ (23) ಬಂಧಿತರು. ಜೂನ್ 6ರಂದು ಅರಕೆರೆಯ ‘ಎ ಡೈಲಿ ನೀಡ್ಸ್ ಸೂಪರ್ ಮಾರ್ಕೆಟ್’ಗೆ ಗ್ರಾಹಕರ ಸೋಗಿನಲ್ಲಿ ಬಂದ ಆರೋಪಿಗಳು ಕ್ಯಾಶ್ ಕೌಂಟರ್ನಲ್ಲಿದ್ದ ಹಣ ದೋಚಲು ಯತ್ನಿಸಿದ್ದಾರೆ. ಇದನ್ನು ತಡೆದ ಕ್ಯಾಶಿಯರ್ ಮೇಲೆ ಹಲ್ಲೆ ನಡೆಸಿ ಹಣ, ಚಾಕೊಲೇಟ್ ಹಾಗೂ ಪರ್ಫ್ಯೂಮ್ ಬಾಟಲಿಗಳನ್ನು ದೋಚಿ ಪರಾರಿಯಾಗಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

