ಭದ್ರಾವತಿ: ಶಾಸಕ ಬಿ.ಕೆ. ಸಂಗಮೇಶ್ವರ ಅವರ ಪುತ್ರನ ಆಪ್ತ ವಿಶ್ವ ಎಂಬಾತನ ಮೇಲೆ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನ್ವರ್ ಕಾಲೋನಿ ರಸ್ತೆಯಲ್ಲಿ ಕಾರಿನಲ್ಲಿ ಬಂದ ನಾಲ್ಕೈದು ಮಂದಿ ವಿಶ್ವನನ್ನು ಅಡ್ಡಗಟ್ಟಿ ಮಚ್ಚು-ಲಾಂಗ್ಗಳಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ತಲೆ, ಕೈ ಹಾಗೂ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಹಳೇ ವೈಷಮ್ಯ ಹಾಗೂ ಸ್ಥಳೀಯ ರಾಜಕೀಯ ಕಾರಣದಿಂದ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಭದ್ರಾವತಿ ಓಲ್ಡ್ ಟೌನ್ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

