ತೀರ್ಥಹಳ್ಳಿ: ಗಡಿಕಲ್ ಪ್ರದೇಶದಲ್ಲಿ ತಡರಾತ್ರಿ ದನ ಕಳ್ಳತನಕ್ಕೆ ಯತ್ನಿಸಿದ ಘಟನೆ ಡ್ಯಾಶ್ಕ್ಯಾಮ್ನಲ್ಲಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಕಳ್ಳರು ದನವನ್ನು ಕಾರಿನೊಳಗೆ ತುಂಬಲು ಯತ್ನಿಸುತ್ತಿದ್ದ ವೇಳೆ ಎದುರಿನಿಂದ ವಾಹನ ಬರುತ್ತಿರುವುದನ್ನು ಕಂಡು, ದನವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಾಲೂಕಿನಲ್ಲಿ ಜಾನುವಾರು ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕಳ್ಳರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

