Breaking News

ಬಳ್ಳಾರಿ ಗಡಿಯಲ್ಲಿ ಲಾರಿ-ಟ್ಯಾಂಕರ್ ಮಧ್ಯ ಭೀಕರ ಅಪಘಾತ : ಚಾಲಕ ಸಜೀವ ದಹನ!

ಬಳ್ಳಾರಿ ಗಡಿ ಭಾಗದಲ್ಲಿ ಲಾರಿ ಮತ್ತು ಟ್ಯಾಂಕರ್ ನಡುವೆ ಭೀಕರವಾದ ಅಪಘಾತ ಸಂಭವಿಸಿದ್ದು, ಬೆಂಕಿಯಿಂದ ಎರಡು ವಾಹನಗಳು ಹೊತ್ತಿ ಉರಿದಿವೆ. ಘಟನೆಯಲ್ಲಿ ಓರ್ವ ಚಾಲಕ ಸಜೀವ ದಹನಗೊಂಡಿದ್ದಾನೆ. ಅನಂತಪುರ ಜಿಲ್ಲೆಯ ಡಿ ಹಿರೇಹಾಳ ಮಂಡಲದಲ್ಲಿ ಈ ಒಂದು ಘಟನೆ ಸಂಭವಿಸಿದೆ.ಜಾಜರಕಲ್ ಟೋಲ್ ಪ್ಲಾಜಾ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಪಂಚರಾಗಿ ಟ್ಯಾಂಕರ್ ರಸ್ತೆ ಬದಿ ನಿಂತಿತ್ತು. ಈ ವೇಳೆ ರಾಂಪುರಂ ಕಡೆಯಿಂದ ಲಾರಿ ವೇಗವಾಗಿ ಬಂದಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಜೀವ ದಹನಗೊಂಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *